ಬಿಜೆಪಿ - ಜೆಡಿಎಸ್ ಪಾದಯಾತ್ರೆ ವೇಳೆ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತೆ ಮೃತ
ರಾಮನಗರ: ವಾಲ್ಮೀಕಿ ಮತ್ತು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ – ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜರುಗಿದೆ. ಆಗಸ್ಟ್ 5ರ ಸೋಮವಾರವಾದ ಇಂದು ಮೂರನೇ ದಿನ ದೋಸ್ತಿ ಪಕ್ಷಗಳ ಪಾದಯಾತ್ರೆ ರಾಮನಗರ ಜಿಲ್ಲೆ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
















